ಮೋದಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸುವೆ: ರೇಣುಕಾ ಚೌಧರಿ

161

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2019ರಲ್ಲಿ ಕರ್ನಾಟಕದ ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ ಗುಜರಾತಿನ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದನ್ನು ವಿಪಕ್ಷಗಳು ಖಂಡಿಸಿವೆ. ಸರ್ಕಾರದ ಅಕ್ರಮವನ್ನು, ಅನ್ಯಾಯವನ್ನು ವಿರೋಧಿಸುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಕಿಡಿ ಕಾರಲಾಗಿದೆ.

ಇದೀಗ ಕಾಂಗ್ರೆಸ್ ಮಾಜಿ ಸಚಿವೆ ರೇಣುಕಾ ಚೌಧರಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ. ಕೋರ್ಟ್ ಎಷ್ಟು ತ್ವರಿತವಾಗಿ ವಿಚಾರಣೆ ನಡೆಸುತ್ತವೆ ಎಂದು ನೋಡೋಣ ಎಂದಿದ್ದಾರೆ. ಈ ವರ್ಗರಹಿತ ಆತ್ಮವೈಭವದ ವ್ಯಕ್ತಿ ನನ್ನನ್ನು ಸದನದಲ್ಲಿ ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೂ ಪರ ವಿರೋಧ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!