ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಕ್ಷದ ವಿರುದ್ಧ ಮಾತನಾಡಿದರು ಅನ್ನೋ ಕಾರಣಕ್ಕೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು.
ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಭೇಟಿಯ ವೇಳೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಪ್ರತಾಪ್ ಸಿಂಹ ಹೊಂದಾಣಿಕೆ ಮಾಡಿಕೊಂಡಿಲ್ಲವೇ ಅಂತಾ ಪ್ರಶ್ನಿಸಿದರು. ರಾಜ್ಯಾಧ್ಯಕ್ಷರು 11 ಮಂದಿಗೆ ನೋಟಿಸ್ ಕೊಡಲಾಗಿದೆ ಅಂತಾರೆ. ನನ್ನ ಹೊರತು ಪಡಿಸಿ ಯಾರಿಗೂ ನೋಟಿಸ್ ಕೊಟ್ಟಿಲ್ಲ ಅಂತಾ ಕಟೀಲ್ ವಿರುದ್ಧ ಕಿಡಿ ಕಾರಿದರು.
ಯಡಿಯೂರಪ್ಪ ಎಂದಿಗೂ ಕೀಳುಮಟ್ಟದ ರಾಜಕೀಯ ಮಾಡಿಲ್ಲ. ಈಗಿರುವ ನಾಯಕರು ಯಾರು ಪಕ್ಷ ಕಟ್ಟಿಲ್ಲ. ಹೀನಾಯ ಸೋಲಿಗೆ ಯಾರು ಕಾರಣ ಎಂದು ಎಲ್ಲರಿಗೂ ಗೊತ್ತಿದೆ. ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಅಂತಾ ಹೇಳಿದರು.