ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಇದೀಗ ಎಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಯ ಪರ್ವ ಶುರುವಾಗಿದೆ. ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚುನಾವಣೆ ದಿನಾಂಕ ಘೋಷಣೆ ಮಾಡಿ, ನೀತಿ ಸಂಹಿತೆ ಜಾರಿಗೆ ತರಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಕಾನೂನು ಉಲ್ಲಂಘನೆ ತಡೆಯುವ ಸಲುವಾಗಿ ಚುನಾವಣೆ ದಿನಾಂಕ ಕೂಡಲೇ ಘೋಷಿಸಬೇಕು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಕ್ಕೆ ಪದೆಪದೆ ಭೇಟಿ ಕೊಟ್ಟು ಜನರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯ ಕೆಲ ಅಭ್ಯರ್ಥಿಗಳು, ಟಿಕೆಟ್ ಆಕಾಂಕ್ಷಿಗಳು ಜನರಿಗೆ ಹಣ ಹಾಗೂ ಉಡುಗರೆ ಹಂಚುತ್ತಿದ್ದಾರೆ. ಇದನ್ನು ತಡೆಯುವ ಸಲುವಾಗಿ ಚುನಾವಣೆ ದಿನಾಂಕ ಘೋಷಿಸಿ ನೀತಿ ಸಂಹಿತೆ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.