ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಮೌಖಿಕವಾಗಿ ಹಾಗೂ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದರು. ಈಗ ನೋಡಿದರೆ ಯೂ ಟರ್ನ್ ಹೊಡೆದಿದ್ದು, ನಾನು ರಾಜೀನಾಮೆ ಕೊಟ್ಟಿಲ್ಲ ಎಂದಿದ್ದಾರೆ.
ಮಾಧ್ಯಮಗಳಲ್ಲಿ ಬರುತ್ತಿರುವುದು ಸುಳ್ಳು. ನನ್ನ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಪಕ್ಷ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೆ ಎಂದು ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದಾಗ, ವಿಧಾನಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದಿದ್ದರು.
ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಆರ್.ಅಶೋಕ್, ಅಶ್ವತ್ಥನಾರಾಯಣ, ಸಿ.ಟಿ ರವಿ, ಸುನೀಲ್ ಕುಮಾರ್, ಶೋಭಾ ಕರಂದ್ಲಾಜೆ ಜೊತೆಗೆ ಇದೀಗ ವಿ.ಸೋಮಣ್ಣ ಸಹ ರೇಸ್ ನಲ್ಲಿದ್ದು, ಯಾರಿಗೆ ಆ ಸ್ಥಾನ ಸಿಗುತ್ತೆ ಅನ್ನೋದು ಕಾದು ನೋಡಬೇಕಿದೆ.