ಪ್ರಜಾಸ್ತ್ರ ಸುದ್ದಿ
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಅವರೆ ಸ್ಪಷ್ಟಪಡಿಸಿದ್ದಾರೆ.
ಇಂದೇ ರಾಜೀನಾಮೆ ಕೊಡಬೇಕಿತ್ತು. ಆದರೆ, ಸ್ಪೀಕರ್ ಇರಲಿಲ್ಲ. ಹೀಗಾಗಿ ಸೋಮವಾರ ರಾಜೀನಾಮೆ ಕೊಡುತ್ತೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಇತರೆ ಪಕ್ಷಗಳ ಇನ್ನು ಕೆಲ ಶಾಸಕರು ರಾಜೀನಾಮೆ ಕೊಡಬಹುದು ಅನ್ನೋ ಸುಳಿವು ಎನ್ನಲಾಗುತ್ತಿದೆ.
ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನೋ ಚರ್ಚೆಯಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಅವರು ಭಾಗವಹಿಸಿದ್ದರು. ಇದೆ ವಿಚಾರವಾಗಿ ಅವರನ್ನು ಜೆಡಿಎಸ್ ಪಕ್ಷದಿಂ ಉಚ್ಛಾಟಿಸಲಾಗಿದೆ. ಈಗ ರಾಜೀನಾಮೆಗೆ ಮುಂದಾಗಿದ್ದಾರೆ.