ಪ್ರಜಾಸ್ತ್ರ ಸುದ್ದಿ
ರಾಯಪುರ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಟುಟೇಜಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಭಾನುವಾರ ಮಾಹಿತಿ ಹಂಚಿಕೊಳ್ಳಲಾಗಿದೆ.
ಈ ಪ್ರಕರಣ ಸಂಬಂಧ ಪುತ್ರನೊಂದಿಗೆ ರಾಯಪುರದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳದ ಕಚೇರಿಗೆ ಹೇಳಿಕೆ ದಾಖಲಿಸಲು ಹೋದಾಗ ಬಂಧಿಸಲಾಗಿದೆ. ಕೋರ್ಟ್ ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಲಾಗುವುದು ಎಂದಿದ್ದಾರೆ.