ನಿವೃತ್ತ ಲೋಕಾಯುಕ್ತ ನ್ಯಾ.ವೆಂಕಟಾಚಲ ನಿಧನ: ಮಗ ಬಂದ ನಂತರ ಅಂತ್ಯಕ್ರಿಯೆ

431

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವೆಂಕಟಾಚಲ(90) ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನವರಾಗಿದ್ದಾರೆ. ಇವರ ಪುತ್ರ ಅರ್ಜುನ್ ವಿದೇಶದಲ್ಲಿದ್ದು ಆತನ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಮಗ ಬಂದ ನಂತರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧಾರಿಸಲಾಗಿದೆಯಂತೆ.

ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿದ್ದರು ಹಾಗೂ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ನಂತರ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಅವರು ಕರ್ನಾಟಕದಲ್ಲಿ ಭ್ರಷ್ಟರಿಗೆ ಸಿಂಹ ಸ್ವಪ್ನದಂತೆ ಕಾಡಿದ್ದರು.




Leave a Reply

Your email address will not be published. Required fields are marked *

error: Content is protected !!