ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಹಳೆಯ ಪಿಂಚಣಿ ಯೋಜನೆ ವಾಪಸ್ ಜಾರಿಗೆ ಬರಬೇಕೆಂದು ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಪಟ್ಟದಕಲ್ಲು ನಿವಾಸಿ ನಿವೃತ್ತ ಶಿಕ್ಷಕ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಅವರು ವೈಯಕ್ತಿಕವಾಗಿ 2 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ವೇಳೆ ಶಾಸಕ ಆನಂದ ನ್ಯಾಮಗೌಡ, ಹೊಳಬಸು ಶೆಟ್ಟರ್ ಸೇರಿ ಇತರರು ಉಪಸ್ಥಿತರಿದ್ದರು.