ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್: ಇಲ್ಲಿನ ಎಲ್ ಬಿ ಮೈದಾನದಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ 12 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಹಿರಿಯ ನಾಯಕರು ಉಪಸ್ಥಿತರಿದ್ದರು.
ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ಮಲ್ಲು ಭಟ್ಟಿ ವಿಕ್ರಮರಾಕ್, ಪೂನಂ ಪ್ರಭಾಕರ್, ಕೊಮಟಿರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ್ ರಾಜ್ ನರಸಿಂಹ, ಪೊಂಗುಲೆಟ್ಟಿ ಶ್ರೀನಿವಾಸ್ ರೆಡ್ಡಿ, ದಾನಾ ಅನುಸೂಯ, ತುಮ್ಮಲ್ ನಾಗೇಶ್ವರ್ ರಾವ್, ಕೊಂಡಾ ಸುರೇಖಾ, ಜುಪಲ್ಯ ಕೃಷ್ಣ್ ರಾವ್ ಸೇರಿ 12 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.