ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಸ್ತೆ ಬದಿಯ ಡಬ್ಬಾ ಅಂಗಡಿಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಪಕೋಡಾ ಮಾರುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿಯವರ ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ ಎಂದು ಕುಟುಕಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್ ಟಿ ಬಾಕಿ ಕೊಡಲಿಲ್ಲ. ಯೋಜನೆಗಳಿಗೆ ಅನುದಾನ ಕೊಡಲಿಲ್ಲ. ಕನ್ನಡಿಗರಿಗೆ ನಿಲ್ಲದ ಅನ್ಯಾಯಕ್ಕಾಗಿ ಈ ಸ್ಥಿತಿಯೇ ಆರ್.ಅಶೋಕ್ ಅವರೇ ಎಂದು ಪ್ರಶ್ನಿಸಿದ್ದು, ಪಕೋಡಾ ಅಂಗಡಿ ಭದ್ರಗೊಳಿಸಿ ಚುನಾವಣೆಯ ನಂತರ ಉಪಯೋಗಕ್ಕೆ ಬರಲಿದೆ ಎಂದು ಕಾಲೆಳೆದಿದ್ದಾರೆ.