ಪ್ರಜಾಸ್ತ್ರ ಸುದ್ದಿ
ಡೆಹ್ರಾಡೋನ್: ಡಿಸೆಂಬರ್ 30ರ ಬೆಳಗಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ರಿಷಬ್ ಪಂಥ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮ್ಯಾಕ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಖಾಸಗಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ಅವರನ್ನು ನೋಡಲು ಗಣ್ಯರ ದಂಡು ಬರುತ್ತಿದ್ದು, ಕುಟುಂಬಸ್ಥರು ಅಸಮಾಧಾನ ಹೊರ ಹಾಕಿದ್ದಾರೆ.
ಸಿನಿಮಾ, ರಾಜಕೀಯ, ಕ್ರೀಡಾ ಕ್ಷೇತ್ರದ ಗಣ್ಯರು, ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದರಿಂದಾಗಿ ಅವರಿಗೆ ಚೇತರಿಸಿಕೊಳ್ಳಲು ಆಗುತ್ತಿಲ್ಲ. ಅವರ ಆರೋಗ್ಯ ಹಾರೈಕೆಗೆ ಭೇಟಿ ನೀಡುತ್ತಿದ್ದರೂ ಅವರಿಗೂ ಈಗಿನ ಸಂದರ್ಭದಲ್ಲಿ ಇದು ತೊಂದರೆಯಾಗುತ್ತಿದೆ.
ದೈಹಿಕ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಚೇತರಿಸಿಕೊಳ್ಳಲು ಅವರಿಗೆ ಸಮಯ ಬೇಕು ಎಂದು ವೈದ್ಯರು ಹೇಳಿದ್ದಾರೆ. ಆದರೆ, ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಕರು ಬರುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಕುಟುಂಬಸ್ಥರು ಅಸಮಾಧಾನ ಹೊರ ಹಾಕಿದ್ದಾರೆ.