ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಇದರಿಂದಾಗಿ ಜನ ಸಮಾನ್ಯರು ಹೈರಾಣಾಗಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಲೆ ಏರಿಕೆ ಸಂಬಂಧ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚಿಸಲಾಗುವುದು ಎಂದರು.
ಸೆಪ್ಟೆಂಬರ್ 5ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರುತ್ತಿದ್ದಾರೆ. ಆಗ ಅವರೊಂದಿಗೆ ಚರ್ಚಿಸುತ್ತೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿರುವ ಸಂಬಂಧ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ ಎಂದರು.