ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಬುಲೆರೊ ಗಾಡಿಯ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. 6 ಜನರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಳುಗಳಲ್ಲಿ ಐವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರನ್ನು ಹುಬ್ಬಳ್ಳಿಗೆ ದಾಖಲಿಸಲಾಗಿದೆ. ಮೃತಪಟ್ಟವರು ಆಂಧ್ರದ ಕರ್ನೂಲ್ ಜಿಲ್ಲೆಯ ಮೂಲದವರೆಂದು ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಿಗೆಯಲ್ಲಿ ಮೆಣಸಿನಕಾಯಿ ಖರೀದಿಗೆ ಬಂದು ಊರಿಗೆ ವಾಪಸ್ ಆಗುತ್ತಿದ್ದರು.
ಭಾನುವಾರ ತಡರಾತ್ರಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ನಡೆದಿದೆ. ಈ ಕುರಿತು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.