ಬೈಕ್ ಅಪಘಾತ: ದಂಪತಿ, ಇಬ್ಬರು ಮಕ್ಕಳ ಸಾವು

241

ಪ್ರಜಾಸ್ತ್ರ ಸುದ್ದಿ

ಹಾಸನ: ಭೀಕರ ಬೈಕ್ ಅಪಘಾತದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಹತ್ತಿರ ನಡೆದಿದೆ. ಲೋಕೇಶ್ ಆಚಾರಿ, ಪತ್ನಿ ಲಕ್ಷ್ಮಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ದುರ್ದೈವಿಗಳು.

ಕಾರೆಹಳ್ಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದು ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ನಾಲ್ವರ ಜೀವಗಳು ಹೋಗಿವೆ. ಸ್ಥಳಕ್ಕೆ ಚನ್ನರಾಯಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!