ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ನಗರದ ಶಾಂತಿ ನಗರದಲ್ಲಿ ಫಿನಾಯಿಲ್ ಮಾರಾಟದ ನೆನಪದಲ್ಲಿ ಹಾಡಹಗಲೇ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಎಂಬುವರ ಮನೆಯಲ್ಲಿ ದರೋಡೆ ಮಾಡಲಾಗಿದೆ.
ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಸುನಂದಾ ತೋಳಬಂದಿ ಅವರ ಪತಿ ವಾಸುದೇವ ಹಾಗೂ ಮಗನಿಗೆ ಮಂಪರು ಬರಿಸುವ ಸ್ಪ್ರೇ ಸಿಂಪಡಣೆ ಮಾಡಿದ್ದಾಳೆ. ಬಳಿಕ ಮನೆಯಲ್ಲಿರುವ 40 ಗ್ರಾಂ ಚಿನ್ನಾಭರಣ, 220 ಗ್ರಾಂ ಬೆಳ್ಳಿಯ ಆಭರಣ ದೋಚಿ ಪರಾರಿಯಾಗಿದ್ದಾಳೆ.
ದರೋಡೆ ಮಾಡುವ ವೇಳೆ ಮನೆಯ ನಾಯಿಗೆ ವಿಷವುಣಿಸಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.