ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ರೌಡಿಶೀಟರ್ ನ ಬರ್ಬರ ಕೊಲೆಯಾದ ಘಟನೆ ನಗರದ ಸೊಲ್ಲಾಪುರ ರಸ್ತೆಯಲ್ಲಿನ ರಿಂಗ್ ರೋಡ್ ಕ್ರಾಸ್ ಬಳಿ ನಡೆದಿದೆ. ವಿಜಯಪುರ ನಿವಾಸಿ 28 ವರ್ಷದ ಸತೀಶರೆಡ್ಡಿ ನಾಗನೂರ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ.
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.