ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ನಗರದಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ಮೇಲೆ ರೌಡಿ ಶೀಟರ್ ಒಬ್ಬ ಚಾಕುವಿನಿಂದ ಇರಿದ ಘಟನೆ ಇಂದು ಮುಂಜಾನೆ ನಡೆದಿದೆ. ಎಚ್ಎಎಲ್ ಹತ್ತಿರದ ಜ್ಯೋತಿ ನಗರದಲ್ಲಿ ಈ ಘಟನೆ ನಡೆದಿದೆ.
ರೌಡಿ ಶೀಟರ್ ಶೇಖ್ ಶರೀಫ್(25) ಎಂಬಾತ ಎಚ್ಎಎಲ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿನುತಾ ಎಂಬುವರ ಮೇಲೆ ಇರಿದು ಪರಾರಿಯಾಗಿದ್ದಾನೆ. ವಿನುತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.