ರೌಡಿ ಫೈಟರ್ ರವಿ ಪ್ರಧಾನಿ ಸ್ವಾಗತಿಸಿದ್ದು ಲೋಪ: ಕೇಂದ್ರ ಸಚಿವೆ ಕರಂದ್ಲಾಜೆ

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭಾನುವಾರ ಪ್ರಧಾನಿ ಮೋದಿ ಮಂಡ್ಯ ಹಾಗೂ ಧಾರವಾಡಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರನ್ನು ಕೆಲ ಗಣ್ಯರು ನಿಗದಿತ ಸ್ಥಳಗಳಲ್ಲಿ ಸ್ವಾಗತಿಸಿದ್ದಾರೆ. ಅಲ್ಲದೆ ರೌಡಿ ಶೀಟರ್ ಫೈಟರ್ ರವಿ ಸಹ ಪ್ರಧಾನಿ ಸ್ವಾಗತಿಸಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಾಗುತ್ತಿದೆ. ಪ್ರಧಾನಿ ಹುದ್ದೆಗೆ ಕಳಂಕ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಈ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಫೈಟರ್ ರವಿ ಯಾರೆಂಬುವುದು ಪ್ರಧಾನಿ ಮೋದಿಗೆ ಗೊತ್ತಿರಲಿಲ್ಲ. ಇದಕ್ಕೆ ಮೋದಿ ಜವಾಬ್ದಾರರಲ್ಲ. ಆದರೆ ಲೋಪವಾಗಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ.

ಸ್ವಾಗತ ಕೋರುವವರ ಪಟ್ಟಿಯಲ್ಲಿ ಫೈಟರ್ ರವಿ ಹೆಸರು ಹೇಗೆ ಬಂತು ಅನ್ನೋದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಮೋದಿ ಸ್ವಾಗತ ಕೋರುವವರ ಪಟ್ಟಿಯನ್ನು ಮೊದಲೇ ಗಮನಿಸಿರಲಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ, ಸೋಷಿಯಲ್ ಮೀಡಿಯಾ ಸೇರಿ ಎಲ್ಲೆಡೆ ತೀವ್ರ ವಾಗ್ದಾಳಿ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!