ಕಲಬುರಗಿಯಲ್ಲಿ ರೌಡಿ ಶೀಟರ್ ಮರ್ಡರ್

280

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ಶರಣರ ನಾಡಿನಲ್ಲಿ ಅಪರಾಧ ಕೃತ್ಯಗಳು ನಿರಂತರವಾಗಿ ನಡೆಯುತ್ತಿರುವುದು ಜನರ ನೆಮ್ಮದಿ ಕೆಡಿಸಿದೆ. ಶನಿವಾರ ರೌಡಿ ಶೀಟರ್ ನೊಬ್ಬನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. 28 ವರ್ಷದ ಶ್ರೀಕಾಂತ ಕೊಲೆಯಾದ ರೌಡಿ ಶೀಟರ್.

ಕೊಲೆಗೂ ಮೊದ್ಲು ಎಲ್ಲರೂ ಸರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಶ್ರೀಕಾಂತನನ್ನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ರಾಮನಗರದ ಖಾಲಿ ಜಾಗದಲ್ಲಿ ಈ ಕೃತ್ಯ ನಡೆದಿದೆ. ಕೊಲೆಯಾದ ಶ್ರೀಕಾಂತ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ. ಕಳೆದ ಐದಾರು ತಿಂಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!