ಪ್ರಜಾಸ್ತ್ರ ಅಪರಾಧ ಸುದ್ದಿ
ರಾಮನಗರ: ಜಿಲ್ಲೆಯ ಕೆರೆಮೇಗಳ ದೊಡ್ಡಿ ಗ್ರಾಮದಲ್ಲಿ ರೌಡಿ ಶೀಟರ್ ಲೋಕೇಶ್(38) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತರ ಜೊತೆಗೆ ಕುಡಿಯಲು ಹೋದಾಗ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಎಎಸ್ ಪಿ ಸುರೇಶ್, ಡಿವೈಎಸ್ಪಿ ದಿನಕರ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಣಕಾಸಿನ ವಿಷಯಕ್ಕೆ ಕೊಲೆಯಾಗಿರಬಹುದು ಎನ್ನಲಾಗುತ್ತಿದೆ. ತನಿಖೆಯ ಬಳಿಕ ಸತ್ಯ ಹೊರ ಬೀಳಲಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.