ಪ್ರಜಾಸ್ತ್ರ ಅಪರಾಧ ಸುದ್ದಿ
ಹುಬ್ಬಳ್ಳಿ: ರೌಡಿ ಶೀಟರ್ ಹಾಗೂ ರಾಯನಾಳ ಗ್ರಾಮ ಪಂಚಾಯ್ತಿ ಸದಸ್ಯ ದೀಪಕ ಶಿವಾಜಿ ಪಟದಾರಿ(34) ಎಂಬಾತನನ್ನು ಭೀಕರವಾಗಿ ಸೋಮವವಾರ ತಡರಾತ್ರಿ ಹತ್ಯೆ ಮಾಡಲಾಗಿದೆ. ಬೈಕ್ ನಲ್ಲಿ ಮನೆಗೆ ಹೊರಟಿದ್ದ ವೇಳೆ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.
ಐದಕ್ಕೂ ಹೆಚ್ಚು ಜನರಿದ್ದ ದುಷ್ಕರ್ಮಿಗಳ ತಂಡ ಕಲ್ಲಿನಿಂದ ತಲೆ ಹಾಗೂ ಮುಖಕ್ಕೆ ಜಜ್ಜಿ ಕೊಲೆ ಮಾಡಿದೆ. ಇತ್ತೀಚೆಗಷ್ಟೇ ದೀಪಕ್ ಪ್ರೇಮ ವಿವಾಹವಾಗಿದ್ದ. ಆಸ್ತಿ ವಿಚಾರವಾಗಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.