ವಿಜಯಪುರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

318

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಗುಮ್ಮಟನಗರಿಯಲ್ಲಿ ರೌಡಿಶೀಟರನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಸ್ತಗೀರಿಸಾಬ ಮಮದಾಪುರ(42) ಅನ್ನೋ ರೌಡಿಶೀಟರನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.

ಅನೈತಿಕ ಸಂಬಂಧ ಶಂಕಿಸಿ ನಗರದ ಹೊರವಲಯದ ಇಟ್ಟಂಗಿಹಾಳ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಲಾಗಿದೆ. ಅಣ್ಣಪ್ಪಗೌಡ ಬಾಗಾಯತ ಹಾಗೂ ಇತರರು ಪರಾರಿಯಾಗಿದ್ದಾರೆ. ಅಣ್ಣಪ್ಪಗೌಡನ ಪತ್ನಿಯೊಂದಿಗೆ ದಸ್ತಗೀರಸಾಬ ಅನೈತಿಕ ಸಂಭಂದ ಹೊಂದಿದ್ದ ಎಂಬ ಶಂಕೆಯ ಮೇರೆಗೆ ಕೊಲೆ ಮಾಡಲಾಗಿದೆ. ಈ ಕುರಿತು ಆದರ್ಶನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!