ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೊಲೆ, ಅಪಹರಣ ಸೇರಿದಂತೆ ಸುಮಾರು 17 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರೌಡಿ ಶೀಟರ್ ಲೋಹಿತ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಹೇಳಿದ್ದಾರೆ. ಆದರೆ, ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ.
ಇಂದಿರಾ ನಗರ ಠಾಣೆ ಪೊಲೀಸರು ಹೆಚ್ಎಸ್ಆರ್ ಲೇಔಟ್ ಠಾಣೆಯ ರೌಡಿ ಶೀಟರ್ ಲೋಹಿತ್ ಮೇಲೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಕಾಲಿಗೆ ಗುಂಡೇಟು ಹೊಡೆದು ಬಂಧಿಸಲಾಗಿದೆ. ಈ ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.