ಆರ್.ಆರ್ ನಗರ ಎಲೆಕ್ಷನ್: ‘ಮುನಿ’ಸಿಕೊಳ್ಳೋದ್ಯಾರು?

283

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಅಭ್ಯರ್ಥಿ ಯಾರು ಅನ್ನೋ ಪ್ರಶ್ನೆ ಜಟಿಲವಾಗಿದೆ. ಹೀಗಾಗಿ ಟಿಕೆಟ್ ಯಾರಿಗೆ ನೀಡಬೇಕು ಅನ್ನೋದು ಹೈಕಮಾಂಡ್ ಗೆ ತಲೆನೋವಾಗಿದೆ.

2018ರ ವಿಧಾನಸಭಾ ಎಲೆಕ್ಷನ್ ಟೈಂನಲ್ಲಿ ವೋಟರ್ ಐಡಿಯಲ್ಲಿ ಅಕ್ರಮ ನಡೆದಿದೆ ಎಂದು ಅಂದು ಬಿಜೆಪಿ ಮುಖಂಡ ತುಳಿಸಿ ಮುನಿರಾಜು ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಹೊರ ಬೀಳಲಿದೆ. ಆಗ ಗೆದ್ದಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿದ್ದಾರೆ. ಈ ಕಾರಣಕ್ಕೆ ಟಿಕೆಟ್ ಯಾರ ಪಾಲಾಗುತ್ತೆ? ಯಾರು ಮುನಿಸಿಕೊಳ್ತಾರೆ ಅನ್ನೋ ಕುತೂಹಲವಿದೆ.

ಒಂದು ವೇಳೆ ಮುನಿರತ್ನ ಅವರಿಗೆ ಟಿಕೆಟ್ ಸಿಗದೆ ಹೋದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಇದ್ರಿಂದಾಗಿ ಇವತ್ತಾದ್ರೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಅಂತಿಮವಾಗುತ್ತಾ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ.




Leave a Reply

Your email address will not be published. Required fields are marked *

error: Content is protected !!