ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನವೆಂಬರ್ 3ರಂದು ನಗರದ ಆರ್.ಆರ್ ನಗರ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹೀಗಾಗಿ ನವೆಂಬರ್ 4ರ ಸಂಜೆ 6ರ ತನಕ, ಈ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಮಾತ್ನಾಡಿರುವ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ, 678 ಬೂತ್ ಗಳನ್ನ ಸ್ಥಾಪಿಸಲಾಗಿದೆ. ಇದರಲ್ಲಿ 11 ಅತಿ ಸೂಕ್ಷ್ಮ, 82 ಸೂಕ್ಷ್ಮ ಪ್ರದೇಶಗಳಿವೆ ಎಂದಿದ್ದಾರೆ. ಇನ್ನು 50 ಕಡೆ ಸಿಸಿ ಕ್ಯಾಮೆರಾ ಹಾಗೂ 40 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.