ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆರ್.ಆರ್ ನಗರ ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.
ಕುಸುಮಾ ವಿರುದ್ಧ ದಾಖಲಾದ ಕೇಸಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳನ್ನ, ಕಾರ್ಯಕರ್ತರನ್ನ ಹೆದರಿಸುವಂತಹ ನೀಚ ಕೆಲಸ ಮಾಡಲಾಗ್ತಿದೆ. ನೀತಿ ಸಂಹಿತೆ ಉಲ್ಲಂಘಿಸದೆ ಇದ್ದರೂ ಎಫ್ಐಆರ್ ದಾಖಲಾಗಿರುವುದು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ನೀಚ ರಾಜಕಾರಣ. ಇದಕ್ಕೆ ಸರ್ಕಾರ ಉತ್ತರಿಸಬೇಕು ಎಂದಿದ್ದಾರೆ.