ಕೈ, ಕಮಲ ಅಭ್ಯರ್ಥಿ ವಿರುದ್ಧ ಎಫ್ಐಆರ್

317

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಭರ್ಜರಿ ಪ್ರಚಾರ ನಡೆದಿದೆ. ಇದರ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮತದಾರರನ್ನ ಸಳೆಯಲು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಹಣ ಹಂಚಿಕೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಅನ್ವಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ರವಿ ಹಾಗೂ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ದೂರಿನ ಅನ್ವಯ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ, ಬಿಜೆಪಿ ಕಾರ್ಯಕರ್ತ ಪುನೀತಕುಮಾರ ದೂರಿನ ಆಧಾರದ್ಮೇಲೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ರವಿ ವಿರುದ್ಧ ದೂರು ನೀಡಲಾಗಿತ್ತು. ಮೊದ್ಲು ಎನ್ ಸಿಆರ್ ಮಾಡಲಾಗಿತ್ತು. ನಂತರ ಕೋರ್ಟ್ ಆದೇಶದ ಮೇಲೆ ಎಫ್ಐಆರ್ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!