ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಿರ್ದೇಶಕ ಎಸ್.ಎಸ್ ರಾಜಮೌಳಿಗೆ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬೆದರಿಕೆ ಹಾಕಿದ್ದಾರೆ ಅನ್ನೋದು ಸುದ್ದಿ ಎಲ್ಲೆಡೆ ಜೋರಾಗಿ ಹರಡುತ್ತಿದೆ. ಆರ್ ಆರ್ ಆರ್ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯಕುಮಾರ ಬೆದರಿಕೆ ಹಾಕಿದ್ದಾರಂತೆ.
ಸ್ವಾತಂತ್ರ್ಯ ಹೋರಾಟಗಾರ ಕೊಮರಾಮ ಭೀಮ ಪಾತ್ರದಲ್ಲಿ ಜೂನಿಯರ್ ಎನ್ ಟಿಆರ್ ಕಾಣಿಸಿಕೊಂಡಿದ್ದಾರೆ. ಕೊಮರಾಮ ಭೀಮ, ಬುಡಕಟ್ಟು ಜನರಿಗಾಗಿ ಹೋರಾಡಿದವರು. ಅವರನ್ನ ಚಿತ್ರದಲ್ಲಿ ಅಲ್ಪಸಂಖ್ಯಾತರ ವ್ಯಕ್ತಿಯ ರೀತಿಯಲ್ಲಿ ಬಿಂಬಿಸಲಾಗ್ತಿದೆ ಎಂದು ರಾಜಮೌಳಿಗೆ ಬೆದರಿಕೆ ಹಾಕಲಾಗಿದೆ.
ರಾಜಮೌಳಿಯ ಬಹುನಿರೀಕ್ಷಿತ ಚಿತ್ರದಲ್ಲಿ ರಾಮಚರಣ, ಜೂನಿಯರ್ ಎನ್ ಟಿಆರ್, ಅಜಯ ದೇವಗನ್ ಹಾಗೂ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ. ಈಗಾಗ್ಲೇ ಈ ಚಿತ್ರದ ಎರಡು ಟೀಸರ್ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.