ಕರ್ನಾಟಕ ಯುವಕರ ರಕ್ಷಣೆ ಬಗ್ಗೆ ಸಚಿವ ಖರ್ಗೆ ಏನಂದರು?

118

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಲಸಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿಯ ಮೂವರು ಯುವಕರು ಕಲಬುರಗಿಗೆ ಹೋದ ಬಗ್ಗೆ ಮಾಹಿತಿ ಇದೆ ಎಂದಿದ್ದಾರೆ.

ರಷ್ಯಾದಲ್ಲಿ ನಮ್ಮ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡಿರುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಅವರನ್ನು ವ್ಯಾಗ್ನರ್ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರಂತೆ. ಇವರೆಲ್ಲ ರಕ್ಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕ ಹೊಂದಿದ್ದೇವೆ. ಕರ್ನಾಟಕದ ಜೊತೆಗೆ ತೆಲಂಗಾಣ, ಉತ್ತರ ಭಾರತದ ಯುವಕರು ಸಹ ಸಿಲುಕೊಂಡಿರುವ ಮಾಹಿತಿ ಇದೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!