ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರದ ರಾಯಭಾರಿಯಾಗಿ ನೇಮಿಸಲಾಗಿದೆ. ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ವೃಕ್ಷಮಾತೆ ಇನ್ನು ಮುಂದೆ ಪರಿಸರ ರಾಯಭಾರಿ.
ಇತ್ತೀಚೆಗೆ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ ಮಾಡಿ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಂಚಿಕೆ ಪತ್ರವನ್ನು ನೀಡಿದ್ದರು. ಇದೀಗ ಅವರನ್ನು ಪರಿಸರ ರಾಯಭಾರಿ ಮಾಡಿ ಆದೇಶಿಸಿದ್ದಾರೆ.