ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ರಾಜ್ಯೋತ್ಸವ ಪ್ರಶಸ್ತಿ ಪರುಸ್ಕೃತ ಸಾಲುಮರದ ವೀರಾಚಾರಿ ಕಳೆದ ರಾತ್ರಿ ಸುಮಾರು 2ಗಂಟೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ. ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನ್ಯಾಯ ಸಿಗದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಿಡ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕ ಜನರಿಗೆ ವಿತರಿಸುವ ಪಡಿತರದಲ್ಲಿ ಅಕ್ರಮ ಮಾಡುತ್ತಿದ್ದಾರೆ ಎಂದು ಹೇಳಿ ಹೋರಾಟ ಮಾಡುತ್ತಿದ್ದರು. ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರಂತೆ. ಅದರಂತೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವೀರಾಚಾರಿ ಅವರು 3 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟಿದ್ದಾರೆ.