ನ್ಯಾಯ ಸಿಗದಕ್ಕೆ ರಾಜ್ಯೋತ್ಸವ ಪುರಸ್ಕೃತ ಪರಿಸರ ಪ್ರೇಮಿ ಆತ್ಮಹತ್ಯೆ!

173

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ರಾಜ್ಯೋತ್ಸವ ಪ್ರಶಸ್ತಿ ಪರುಸ್ಕೃತ ಸಾಲುಮರದ ವೀರಾಚಾರಿ ಕಳೆದ ರಾತ್ರಿ ಸುಮಾರು 2ಗಂಟೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ. ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನ್ಯಾಯ ಸಿಗದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮಿಡ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕ ಜನರಿಗೆ ವಿತರಿಸುವ ಪಡಿತರದಲ್ಲಿ ಅಕ್ರಮ ಮಾಡುತ್ತಿದ್ದಾರೆ ಎಂದು ಹೇಳಿ ಹೋರಾಟ ಮಾಡುತ್ತಿದ್ದರು. ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರಂತೆ. ಅದರಂತೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವೀರಾಚಾರಿ ಅವರು 3 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!