ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿರುವ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಕಾರಿಗೆ ಮುತ್ತಿಗೆ ಹಾಕಿದ ಪ್ರಕರಣ ನಡೆಯಿತು. ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಭವನದ ಎದುರು ಮುತ್ತಿಗೆ ಹಾಕಿದರು.
ಜಿಲ್ಲಾಡಳಿತ ಭವನದಲ್ಲಿ ಸಭೆಗೆ ಹಾಜರಾಗಲು ಬಂದಿದ್ದ ಸಚಿವರನ್ನು ಬಾಗಿಲಲ್ಲೇ ತಡೆದು ಮುತ್ತಿಗೆ ಹಾಕಿದರು. ಈ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಧಿಕ್ಕಾರ ಕೂಗಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.