ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡರನ್ನ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮನು ಬಳಗಾರ ತಿಳಿಸಿದ್ದಾರೆ.
ಫೆಬ್ರವರಿ 26ರಿಂದ 28ರ ತನಕ ಮೂರು ದಿನಗಳ ಕಾಲ ಹಾವೇರಿಯಲ್ಲಿ ಸಮ್ಮೇಳನ ನಡೆಯಲಿದೆ. ಇದರ ಸಮ್ಮೇಳನಾಧ್ಯಕ್ಷರ ಆಯ್ಕೆಗಾಗಿ ಗೊ.ರು ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್ ಗುಂಜಾಳ, ಕೆ.ಎಸ್ ಭಗವಾನ ಹಾಗೂ ದೊಡ್ಡರಂಗೇಗೌಡರ ಹೆಸರುಗಳು ಚರ್ಚೆಗೆ ಬಂದಿದ್ವು. ಅಂತಿಮವಾಗಿ ದೊಡ್ಡರಂಗೇಗೌಡರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ರು.