ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಆಯುಧ ಪೂಜೆಯ ದಿನ ಬಹುನಿರೀಕ್ಷಿತ ಕನ್ನಡದ ಚಿತ್ರಗಳು ಬಿಡುಗಡೆಗೊಂಡಿವೆ. ನಟ ದುನಿಯಾ ವಿಜಿ ಮೊದಲ ಬಾರಿಗೆ ನಿರ್ದೇಶನ ಮಾಡಿದ ಸಲಗ ಬಿಡುಗಡೆಯಾಗಿದೆ. ಶೇಕಡ 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ್ಮೇಲೆ ಬಂದಿರುವ ಎರಡು ಬಿಗ್ ಬಜೆಟ್ ಸಿನಿಮಾಗಳಿವು.
ಆದರೆ, ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಚಿತ್ರದ ಬೆಳಗಿನ ಶೋ ಶುರುವಾಗಿಯೇ ಇಲ್ಲ. ಯಾರಿಗೂ ಟಿಕೆಟ್ ಸಹ ನೀಡಿಲ್ಲ. ಇದರಿಂದಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಥಿಯೇಟರ್ ಗಳ ಮುಂದೆ ಗಲಾಟೆ ಮಾಡಿದ್ದಾರೆ. ನಿರ್ಮಾಪಕ ಸೂರಪ್ಪ ಬಾಬು ಅವರ ಕಚೇರಿಗೆ ಮುತ್ತಿಗೆ ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.
ಸಿನಿಮಾ ಬಿಡುಗಡೆಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಳ್ಳದ ಪರಿಣಾಮ ಚಿತ್ರ ಪ್ರದರ್ಶನಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಅಲ್ದೇ, ಇವತ್ತು ರಿಲೀಸ್ ಆಗೋದು ಸಹ ಡೌಟ್ ಎನ್ನಲಾಗಿದ್ದು, ಚಿತ್ರ ತಂಡ ಸ್ಪಷ್ಟನೆ ಕೊಡಬೇಕಿದೆ.