ಸಲೀಂ ಮಾತಿನಿಂದ ಮುಜುಗರ ಆಗಿದೆ: ಡಿ.ಕೆ ಶಿವಕುಮಾರ

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಗುಸುಗುಸು ಮಾತನಾಡಿರುವುದು ಬಯಲಾಗಿದೆ. ಅವರಿಬ್ಬರ ಮಾತುಗಳು ಮೈಕ್ ನಲ್ಲಿ ರೆಕಾರ್ಡ್ ಆಗಿದೆ. ಈ ಬಗ್ಗೆ ಮಾತನಾಡಿರುವ ಡಿ.ಕೆ ಶಿವಕುಮಾರ್, ಸಲೀಂ ಆಡಿದ ಮಾತುಗಳಿಂದ ನನಗೆ ಮುಜುಗರ ಆಗಿದೆ. ನಾನು ಯಾವ ಪರ್ಸಂಟೇಜ್ ವಿಚಾರದಲ್ಲಿ ಇಲ್ಲ. ನನಗೂ ಪಕ್ಷಕ್ಕೂ ಇದು ಸಂಬಂಧವಿಲ್ಲವೆಂದು ಹೇಳಿದರು.

ಸಲೀಂ ವಿರುದ್ಧ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದೆ. ಉಗ್ರಪ್ಪನವರು ಈಗಾಗ್ಲೇ ಉತ್ತರ ಕೊಟ್ಟಿದ್ದಾರೆ ಎಂದು ಭಾವಿಸಿದ್ದೇನೆ. ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರು, ಜೈಕಾರ ಹಾಕುವವರು, ಚಪ್ಪಲಿ ಎಸೆಯುವವರು ಇರ್ತಾರೆ. ಇದು ಎಲ್ಲ ಪಕ್ಷಗಳಲ್ಲೂ ಇದಾರೆ. ನಾನು ಹಳ್ಳಿಯಿಂದ ಬಂದವನು. ನನ್ನ ಬಾಡಿ ಲ್ಯಾಂಗ್ವೇಜ್ ಬದಲಾವಣೆ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರ ವಿರುದ್ಧ ಅವರ ಪಕ್ಷದವರೆ ಭ್ರಷ್ಟಾಚಾರದ ಆರೋಪ ಮಾಡಿದ್ದರು ಪಕ್ಷ ಕ್ರಮ ತೆಗೆದುಕೊಂಡಿದಿಯಾ ಎಂದು ಪ್ರಶ್ನಿಸಿದರು.




Leave a Reply

Your email address will not be published. Required fields are marked *

error: Content is protected !!