ಧಾರವಾಡ ಡಿಸಿ ನಿವಾಸದ ಬಳಿಯ ಶ್ರೀಗಂಧದ ಮರ ಕಳ್ಳತನ

211

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದ್ದು, ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಡಿಸಿ ನಿವಾಸದ ಬಳಿ ಶ್ರೀಗಂಧದ ಮರ ಕಳ್ಳತನ ಮಾಡಿದ ಸ್ಥಳದ ಪರಿಶೀಲನೆ ನಡೆಸಲಾಗಿದೆ. ತನಿಖಾ ತಂಡಕ್ಕೆ ಮರಗಳ್ಳರ ಸುಳಿವು  ಸಿಕ್ಕಿದ್ದು, ಶೀಘ್ರದಲ್ಲೇ ಶ್ರೀಗಂಧದ ಮರ ಕಳ್ಳರನ್ನು ಬಂಧಿಸಲಾಗುವುದು.

– ಆರ್.ಎಸ್.ಉಪ್ಪಾರ, ಧಾರವಾಡ ಆರ್ ಎಫ್ ಓ

ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಿಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಅರಣ್ಯ ಇಲಾಖೆಯಿಂದ ಎಫ್ಐಆರ್  ಸಹ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.




Leave a Reply

Your email address will not be published. Required fields are marked *

error: Content is protected !!