ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ದೊಡ್ಡ ಉರುಳು ಆಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣ, ಸಚಿವ ಕೆ.ಎಸ್ ಈಶ್ವರಪ್ಪ ತಲೆದಂಡಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆಗಳಿವೆ. ಕೆಲ ಮೂಲಗಳ ಪ್ರಕಾರ ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಾಧ್ಯತೆಯಿದೆ.
ಇಂದು ಸಂಜೆ ಅಥವ ನಾಳೆ ರಾಜೀನಾಮೆ ನೀಡುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಆದರೆ, ಇದಕ್ಕೆ ಕೆಲವೊಂದಿಷ್ಟು ಷರತ್ತುಗಳನ್ನು ಹಾಕಿದ್ದಾರಂತೆ. ಈ ಪ್ರಕರಣದಲ್ಲಿ ಆದಷ್ಟು ಬೇಗ ತಮ್ಮನ್ನು ಆಚೆ ತರುವುದು ಒಂದಾಗಿದೆ ಎಂದು ಹೇಳಲಾಗುತ್ತಿದೆ. ಇದು ಎಷ್ಟು ಸತ್ಯ ಸುಳ್ಳು ಅನ್ನೋದು ತನಿಖೆ ಬಳಿಕ ಗೊತ್ತಾಗಲಿದೆ. ಈ ಮೂಲಕ ಇರೋ ವರ್ಷದೊಳಗೆ ಮತ್ತೆ ಸಚಿವರಾಗಬೇಕು ಅನ್ನೋದು ಹಾಗೂ ರಾಜ್ಯ ಸರ್ಕಾರಕ್ಕೆ ಎದುರಾಗಿರುವ ಸಂಕಷ್ಟದಿಂದ ಪಾರಾಗುವುದು ಅನ್ನೋ ಉದ್ದೇಶವಿದೆ ಎಂದು ಹೇಳಲಾಗುತ್ತಿದೆ.