ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ, ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ, ಸಿಎಂ ಬೊಮ್ಮಾಯಿ ಕೂಡಲೇ ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಇಲ್ಲದಿದ್ದೆ ಸಿಎಂ ಮನೆಗೆ ಘೇರಾವ್ ಹಾಕಲಾಗುವುದು ಎಂದರು.
ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಕಾರಣವೆಂದು ಡೆತ್ ನೋಟ್ ನಲ್ಲಿದೆ. ಹೀಗಾಗಿ ಈ ಸಾವಿಗೆ ಈಶ್ವರಪ್ಪ ನೇರ ಹೊಣೆ. ಕೂಡಲೇ ಅವರ ವಿರುದ್ಧ ದೂರು ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಲಾಗಿದೆ.