ನಾನೇಕೆ ರಾಜೀನಾಮೆ ಕೊಡಲಿ: ಸಚಿವ ಈಶ್ವರಪ್ಪ

339

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಸಚಿವ ಈಶ್ವರಪ್ಪ, ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೆಂದೇ ಗೊತ್ತಿಲ್ಲ. ಅವರ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ. ನಾನೇಕೆ ರಾಜೀನಾಮೆ ಕೊಡಲಿ ಎಂದು ಪ್ರಶ್ನಿಸಿದರು.

ನಾನು ಯಾವುದೇ ತಪ್ಪು ಮಾಡಿಲ್ಲ. ಸಂತೋಷೇ ತಪ್ಪು ಮಾಡಿದ್ದು. ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರ ಕಾಪಿ ತೆಗೆದುಕೊಂಡು ಸಂತೋಷ್ ವಿರುದ್ಧ ಕೋರ್ಟ್ ನಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ. ಅದರ ನೋಟಿಸ್ ಹೋಗಿದೆ. ಇದರಿಂದ ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಈಶ್ವರಪ್ಪ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!