ಮಂಡ್ಯದಲ್ಲಿ ಹಂಚಲು ತಂದಿದ್ದ ಸೀರೆ ಜಪ್ತಿ

182

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಮಿಷಗಳ ಭರಾಟೆ ಜೋರಾಗಿ ನಡೆದಿದೆ. ನಮ್ಮ ಜನರು ಸಹ ಆಮಿಷಗಳಿಗೆ ಒಗ್ಗಿಕೊಂಡಿದ್ದಾರೆ. ಹೀಗಾಗಿ ಪ್ರತಿಯೊಂದು ರಾಜಕೀಯ ಪಕ್ಷಗಳು ಮತಗಳನ್ನು ಸೆಳೆಯಲು ನಾನಾ ಆಮಿಷ ನಡೆಸಿದ್ದು, ಶ್ರೀರಂಗಪಟ್ಟಣದಲ್ಲಿ ಬಿಜೆಪಿಯಿಂದ ಹಂಚಲು ತಂದಿದ್ದ 440 ಸೀರೆಗಳನ್ನು ಜಪ್ತಿ ಮಾಡಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಹೋಬಳಿಯ ನೇರಳೆಕೆರೆ ಗ್ರಾಮದಲ್ಲಿ ಮತದಾರರಿಗೆ ಹಂಚಲು ಸೀರೆ, ಸ್ಟೀಲ್ ತಟ್ಟೆ, ಕುಂಕುಮ ಒಳಗೊಂಡ ಚೀತ ಸಿದ್ಧಪಡಿಸಲಾಗಿತ್ತು. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಅಧಿಕಾರಿಗಳು ದಾಳಿ ನಡೆಸಿ ಚೀಲದಲ್ಲಿರುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!