ಸವದತ್ತಿ ಯಲ್ಲಮ್ಮ, ಹುಲಿಗೆಮ್ಮದೇವಿ ಪ್ರಾಧಿಕಾರಿ

165

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾಡಿನ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಹಾಗೂ ಹುಲಿಗೆಮ್ಮದೇವಿ ದೇವಸ್ಥಾನ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಿ ರಚಿಸಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವೆ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಿ ರಚಿಸಿ 87 ಎಕರೆ ಪ್ರದೇಶ ಅಭಿವೃದ್ಧಿಪಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆಯೂ ಒಂದಿಷ್ಟು ಜಾಗ ಅಭಿವೃದ್ಧಿ ಪಡಿಸಲಿದೆ.

ಕೊಪ್ಪಳ ಜಿಲ್ಲೆಯ ಹುಲಿಗೆಮ್ಮದೇವಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು. ಭಕ್ತರಿಂದ ದೇವಸ್ಥಾನಕ್ಕೆ ಸಾಕಷ್ಟು ಕಾಣಿಕೆ ಬರುತ್ತಿದೆ. ಅನುದಾನದಲ್ಲಿಯೂ ಕೊರತೆ ಇಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!