ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಥಣಿಯಿಂದ ಟಿಕೆಟ್ ಸಿಗುವ ವಿಶ್ವಾಸವಿತ್ತು. ಮುಂದಿನ ನಿರ್ಧಾರವನ್ನು ನಾಳೆ ಸಂಜೆ ತಿಳಿಸುತ್ತೇನೆ ಎಂದಿದ್ದಾರೆ.
20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ. ನನ್ನ ಜೊತೆಗೆ ಹಲವರು ಕೆಲಸ ಮಾಡಿದ್ದಾರೆ. ಕ್ಷೇತ್ರದ ಜನರು ನನ್ನ ಹೈಕಮಾಂಡ್. ಟಿಕೆಟ್ ಗಾಗಿ ನಾನು ಭಿಕ್ಷೆ ಬೇಡಬೇಕಾ. ಕ್ಷೇತ್ರದ ಜನರೊಂದಿಗೆ ಚರ್ಚಿಸಿ ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.