ವಿಜಯಪುರದಲ್ಲಿನ ಕೈ ಕಚೇರಿಗೆ ಸಾವರ್ಕರ್ ಫೋಟೋ

259

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸಾವರ್ಕರ್ ಫೋಟೋ ವಿಚಾರ ಜಿಲ್ಲೆಗೂ ಕಾಲಿಟ್ಟಿದ್ದು, ವಿವಾದ ತಣ್ಣಗಾಗಿಸುವ ಬದಲು ಮತ್ತಷ್ಟು ಹೆಚ್ಚಾಗುವ ಘಟನೆಗಳು ನಡೆಯುತ್ತಿವೆ. ಭಾನುವಾರ ತಡರಾತ್ರಿ ಯಾರೋ ಕಿಡಿಗೇಡಿಗಳು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದಾರೆ.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಶ್ರೀ ಗಜಾನನ ಮಹಾಮಂಡಳ ಸಭೆಯ ವೇದಿಕೆಗೆ ಸಾವರ್ಕರ್ ಹೆಸರಿಡಲಾಗಿದೆ. ಇದರ ಬೆನ್ನಲ್ಲೇ ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆಗೆ ಯಾರೋ ಸಾವರ್ಕರ್ ಫೋಟೋ ಅಂಟಿಸಿ ಹೋಗಿದ್ದಾರೆ. ಇದು ಮತ್ತೊಂದು ರೀತಿಯ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!