ಪ್ರಜಾಸ್ತ್ರ ಸುದ್ದಿ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಮೇಲಿನ ದಾಳಿ ಹಾಗೂ 2002ರಲ್ಲಿ ಗುಜರಾತಿನ ಗೋದ್ರಾದಲ್ಲಿ ನಡೆದ ಹತ್ಯಾಕಾಂಡದ ಪ್ರಕರಣಗಳಿಗೆ ಮಂಗಳವಾರ ತೆರೆ ಎಳೆದಿದೆ.
2019ರಲ್ಲಿನ ಸುಪ್ರೀಂ ಕೋರ್ಟಿನ ತೀರ್ಪಿನ ದೃಷ್ಟಿಯಿಂದ ಸಮಯ ದೂಡದಂತೆ, ಯಾವುದೇ ಅವಹೇಳನ ಪ್ರಕರಣಗಳು ಇಲ್ಲದ ಕಾರಣ ರಾಮ ಜನ್ಮಭೂಮಿ, ಬಾಬರಿ ಮಸೀದಿ ಭೂ ವಿವಾದದ ಪ್ರಕರಣಗಳಿಗೆ ತೆರೆ ಎಳೆದಿದೆ.
ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹಾಗೂ ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್, ಜೆ.ಬಿ ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯಪೀಠ, ವಿಚಾರಣೆಗಳು ಮುಗಿಯುತ್ತಿದ್ದಂತೆ ನಿರುಪಯುಕ್ತವಾಗಿವೆ. ಇನ್ನು 2002ರಲ್ಲಿ ಗುಜರಾತಿನ ಗೋದ್ರಾ ಹತ್ಯಾಕಾಂಡದ ಪ್ರಕರಣದಲ್ಲಿ ಮುಗ್ಧ ಜನರ ಮೇಲೆ ಸುಳ್ಳು ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ ಬಂಧಿತವಾಗಿರುವ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಅರ್ಜಿಯನ್ನು ವಿಚಾರಣೆ ನಡೆಸಲಿದೆ.