ಪ್ರಜಾಸ್ತ್ರ ಸುದ್ದಿ
ನವದೆಹಲಿ: ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಚಿಂತಕ, ಸಾಮಾಜಿಕ ಹೋರಾಟಗಾರ ವರವರ ರಾವ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
84 ವರ್ಷದ ವರವರ ರಾವ್ ಗೆ ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಲಾಗಿದೆ. ಬಾಂಬೆ ಹೈಕೋರ್ಟ್ ಇವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು. ನ್ಯಾಯಾಧೀಶರಾದ ಯು.ಯು ಲಲಿತ್, ಅನಿರುದ್ಧ್ ಬೋಸ್, ಸುಧಾಂಶು ಧುಲಿಯಾ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿದೆ.