ನಟ ಬಾಲಯ್ಯ, ತೆಲಂಗಾಣ, ಆಂಧ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

189

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ತೆಲುಗು ಚಿತ್ರರಂಗದ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಹಾಗೂ ತೆಲಂಗಾಣ, ಆಂಧ್ರ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅದು ಗೌತಮಿ ಪುತ್ರ ಶಾತಕರ್ಣಿ ಚಿತ್ರದ ಸಲುವಾಗಿ ನೋಟಿಸ್ ನೀಡಲಾಗಿದೆ.

ನಂದಮೂರಿ ಬಾಲಕೃಷ್ಣ ಅಭಿನಯದ ಗೌತಮಿ ಪುತ್ರ ಶಾತಕರ್ಣಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಸರ್ಕಾರ ಘೋಷಣೆ ಮಾಡಿತ್ತು. ಹೀಗಿದ್ದರೂ ಟಿಕೆಟ್ ದರ ಇಳಿಸದೆ ಹಣ ಲಪಟಾಯಿಸಿದ್ದಾರೆ ಎಂದು ಮೂವಿ ವೀವರ್ಸ್ ಅಸೋಸಿಯೇಷನ್ ಕೋರ್ಟ್ ಮೊರೆ ಹೋಗಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಗೌತಮಿ ಪುತ್ರ ಶಾತಕರ್ಣಿ ಚಿತ್ರ ನಟ ಬಾಲಯ್ಯನವರ 100ನೇ ಸಿನಿಮಾ. 2017, ಜನವರಿ 12ರಿಂದ ಈ ಚಿತ್ರ ತೆರೆಗೆ ಬಂದಿದೆ. ನಟಿ ಶ್ರೇಯಾ ಬಾಲಯ್ಯಗೆ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಕ್ರಿಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!