ಪ್ರಜಾಸ್ತ್ರ ಸದ್ದಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ. ಚುನಾವಣೆ ಪೂರ್ವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳನ್ನು ಪ್ರಶ್ನಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ, ಕೇಜ್ರಿವಾಲ್ ಬಂಧನದ ಸಮಯ ಕುರಿತು ಉತ್ತರಿಸಲು ಹೇಳಿದ್ದಾರೆ. ಜೀವನ ಮತ್ತು ಸ್ವಾತಂತ್ರ್ಯ ಅತ್ಯಂತ ಮಹತ್ವದ್ದಾಗಿದೆ. ಅದನ್ನು ನೀವು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಸಧ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.