ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕರ್ನಾಟಕದ ಜಲ ವಿವಾದಗಳಲ್ಲಿ ಕರ್ನಾಟಕ ಪರ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಿ ಹಲವು ಪ್ರಕರಣಗಳಲ್ಲಿ ಜಯ ತಂದು ಕೊಟ್ಟಿದ್ದ ಹಿರಿಯ ವಕೀಲ ಪಾಲಿ ಎಸ್ ನರೀಮನ್(95) ನಿಧನರಾಗಿದ್ದಾರೆ.
ವಕೀಲ ವೃತ್ತಿಯಲ್ಲಿ ಸುದೀರ್ಘ 70 ವರ್ಷಗಳ ಅನುಭವ ಹೊಂದಿದ್ದರು. 2011-13ರ ತನಕ ಭಾರತದ ಸಾಲಿಸಿಟರ್ ಜನರಲ್ ಆಗಿದ್ದರು. 1989-2005ರ ತನಕ ಪ್ಯಾರಿಸ್ ನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮಂಡಳಿ ಕೋರ್ಟ್ ಉಪಾಧ್ಯಕ್ಷರಾಗಿದ್ದರು.
1975ರಲ್ಲಿ ಅಂದಿನ ಪ್ರಧಾನಿ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಾಗ ಇದನ್ನು ವಿರೋಧಿಸಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಜನವರಿ 10, 1929ರಂದು ರಂದು ಮ್ಯಾನ್ಮರ್ ನಲ್ಲಿ ಜನಿಸಿದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಕಿ ವೃತ್ತಿ ಪ್ರಾರಂಭಿಸಿದರು.
ಇವರ ಸಾಧನೆಗೆ ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ 1991ರಲ್ಲಿ ಪದ್ಮಭೂಷಣ, 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿದೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.