ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾದ ಹೈಪ್ರೊಫೈಲ್ ಪ್ರಕರಣಗಳಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕೇಸ್. ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಮೊಕದ್ದಮೆ ವಜಾಗೊಳಿಸುವಂತೆ ಡಿ.ರೂಪಾ ಮನವಿ ಮಾಡಿದ್ದರು. ಇಬ್ಬರ ನಡುವಿನ ಪ್ರಕರಣ ಇತ್ಯರ್ಥ ಪಡಿಸಲು ನಾವು ಪ್ರಯತ್ನ ನಡೆಸಿದ್ದು, ಸಾಮಾಜಿಕ ಜಾಲತಾಣ, ಟಿವಿ, ಪತ್ರಿಕೆಗಳಲ್ಲಿ ಯಾವುದೇ ರೀತಿಯ ಮಾಹಿತಿ ನೀಡದಂತೆ ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ಜನವರಿ 12, 2024ಕ್ಕೆ ನಿಗದಿಯಾಗಿದೆ.
ರೋಹಿಣಿ ಸಿಂಧೂರಿ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಡಿ.ರೂಪಾ ಮಾಡಿರುವ ಪೋಸ್ಟ್ ತೆಗೆದು ಹಾಕುವ ಸಂಬಂಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಆಗ ಎಲ್ಲ ಪೋಸ್ಟ್ ಗಳನ್ನು ತೆಗೆದು ಹಾಕಲು ಅಸಾಧ್ಯವಾದರೆ, ರೋಹಿಣಿ ವಿರುದ್ಧದ ಎಲ್ಲ ಹೇಳಿಕೆಗಳನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಪೋಸ್ಟ್ ಮಾಡಿ ಎಂದು ಡಿ.ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಅದಾಗ್ಯೂ ಜಟಾಪಟೆ ಮುಂದುವರೆಯಿತು. ಇದರಿಂದಾಗಿ ಸರ್ಕಾರಕ್ಕೆ ತೀವ್ರ ಮುಜುಗರವಾಯಿತು.